ವಚನ - 227     
 
ಉತ್ತರಾಪಥದ ಮೇಲೆ ಮೇಘವರ್ಷ ಕರೆಯಲು, ಆ ದೇಶದಲ್ಲಿ ಬರನಾಯಿತ್ತು! ಆ ದೇಶದ ಪ್ರಾಣಿಗಳೆಲ್ಲರೂ ಮೃತವಾದರು! ಅವರ ಸುಟ್ಟ ರುದ್ರಭೂಮಿಯಲ್ಲಿ, ನಾ ನಿಮ್ಮನರಸುವೆ ಗುಹೇಶ್ವರಾ.