ವಚನ - 240     
 
ಮಂಜರನೇತ್ರದಲ್ಲಿ ಉಭಯಚಂದ್ರರ ಕಾಬವರಾರೊ? ಕಂಡುದ ದಶರವಿ ಕರದಲ್ಲಿ ಪಿಡಿದು ಅಗ್ನಿಮುಖಕ್ಕೆ ಸಲಿಸುವರಲ್ಲದೆ, ಲಿಂಗಮುಖಕ್ಕೆ ಸಲಿಸುವರಾರೊ? ತದನಂತರ ಪ್ರಾಣಲಿಂಗಕ್ಕೆ ಕೊಟ್ಟು ಕೊಂಬಲ್ಲಿ ನಿರಂತರ ಸಾವಧಾನಿ ಗುಹೇಶ್ವರಾ-ನಿಮ್ಮ ಪ್ರಸಾದಿ.