ವಚನ - 244     
 
ನಾಭಿಮಂಡಲದೊಳಗೆ ಈರೈದು ಪದ್ಮದಳ, ಸದಮದ ಗಜಮಸ್ತಕದೊಳಗೆ ತೋರುತ್ತದೆ. ಅಕಾರ ಉಕಾರ ಮಕಾರ ಮರ್ಮಸ್ಥಾನ ತ್ರಿಕೂಟಸ್ಥಾನದ ಸಮರಸದ ಸುಖದಲ್ಲಿ ಬೆಳೆದ ಕಂದ ಮೂಲಾದಿಗಳ, ಹೊಸರಸದ ಅಮೃತವನು ಓಸರಿಸಿ, ದಣಿಯುಂಡ ತೃಪ್ತಿಯಿಂದ ಸುಖಿಯಾದೆನು ಗುಹೇಶ್ವರಾ.