ವಚನ - 249     
 
ಅಂಬುಧಿ ಉರಿಯಿತ್ತು ಅವನಿಯ ಮೇಲನರಿಯಲು. ಕೋಡೆರಡರೊಳೊಂದ ತಿಳಿದು, ವಾಯುವ ಬೈಯುತ್ತ, ತುಂಬಿ ಅಮೃತವ ಕಂಡು ಪ್ರಾಣನಾಥಂಗೆ ಅರ್ಪಿತವ ಮಾಡಿ, ಆ ಪ್ರಸಾದದಿಂದ ಸುಖಿಯಾದೆನಯ್ಯಾ-ಗುಹೇಶ್ವರಾ.