ವಚನ - 272     
 
ಪಂಚಬ್ರಹ್ಮಮೂರ್ತಿ ಪ್ರಣವ ಮಂತ್ರರೂಪ ಪಂಚಮುಖ ದಶಭುಜ ಫಣಿಯ ಮಣಿಯ ಮೇಲೆ ನೋಡುತ್ತೈದಾನೆ! ಸಮತೆ ಸಮಾಧಿಯೆಂಬ ಸಮರಸದೊಳಗೆ; ಚಂದ್ರಕಾಂತಕೊಡದಲ್ಲಿ ಅಮೃತವ ತುಂಬಿ, ಕೊಡನೊಡೆಯದೆ ಬೆಳಗುತ್ತಿರ್ದರು, ಗುಹೇಶ್ವರಾ ನಿಮ್ಮ ಶರಣರು.