ವಚನ - 37     
 
ಹಿರಿದಪ್ಪ ಜಲಧಿಯ ಮಡುವಿನೊಳಗೆ, ಕರಿಯ ಕಬ್ಬಿಲ ಜಾಲವ ಬೀಸಿದ ನೋಡಯ್ಯಾ. ಅರಿದ ತಲೆ ಐದು, ಅರಿಯದ ತಲೆ ಐದು, ಕರಿಯ ತಲೆ ಐದು, ಮುಂದೈದಾವೆ ನೋಡಯ್ಯಾ. ಕರಿಯ ಕಬ್ಬಿಲ ಜಾಲವ ಹೊತ್ತುಕೊಂಡು ಹೋದಡೆ ನೇತ್ರದಲೋಕುಳಿಯಾಡಿತ್ತ ಕಂಡೆನು ಗುಹೇಶ್ವರಾ.