ವಚನ - 379     
 
ಒಡಲಲ್ಲಿ ಹುಟ್ಟಿತ್ತು, ಭ್ರಮೆಯಿಂದ ಬೆಳೆಯಿತ್ತು. ಒಡನೆ ಹುಟ್ಟಿತ್ತು, ತನ್ನನರಿಯದ ಕಾರಣ. ಇದು ಒಂದು ಸೋಜಿಗವ ಕಂಡೆ. ಕೂಡೆ ಭರಿತವೆಂದರಿಯಲು ಅಂಗದಲಳವಟ್ಟಿತ್ತು ಗುಹೇಶ್ವರಾ.