ವಚನ - 385     
 
ಗುರುಶಿಷ್ಯಸಂಬಂಧಕ್ಕೆ ಲಿಂಗವ ಧರಿಸುವರಯ್ಯಾ. ನಿಮ್ಮ ಬಂಧನಕ್ಕಿಕ್ಕಿ ಆಳುವರಯ್ಯಾ. ಆನು ಕಂಡು ಮರುಗಿ `ಅಕಟಕಟಾ' ಎಂದೆನಲ್ಲಾ! ಕೂಗಿಲ್ಲ ಬೊಬ್ಬೆಯಿಲ್ಲ ಹೋದ ಹೊಲಬನರಿಯರು ದೇವಾ ಗುಹೇಶ್ವರಾ ಬಾಳುದಲೆಯ ಹಿಡಿದೆನು.