ವಚನ - 408     
 
ವಾಯದ ಪಿಂಡಿಗೆ ಮಾಯದ ದೇವರಿಗೆ ವಾಯಕ್ಕೆ ಕಾಯವ ಬಳಲಿಸದೆ ಪೂಜಿಸಿರೊ. ಕಟ್ಟುಗೂಂಟಕ್ಕೆ ಬಂದ ದೇವರ ಪೂಜಿಸಲು, ಸೂಜಿಯ ಪೋಣಿಸಿ ದಾರವ ಮರೆದಡೆ ಹೊಲಿಗೆ ಬಿಚ್ಚಿತ್ತು ಗುಹೇಶ್ವರಾ.