ವಚನ - 482     
 
ಜ್ಞಾನದ ಉಬ್ಬು ಕೊಬ್ಬಿನಲ್ಲಿ ನುಡಿವುತ್ತಿಪ್ಪರೆಲ್ಲರ ನಾಮ ನಾಸ್ತಿಯಾಗದು, ತನುಗುಣ ನಾಸ್ತಿಯಾಗದು, ಕರಣಾದಿಗುಣಂಗಳು ನಾಸ್ತಿಯಾಗವು, ಕರಸ್ಥಲವು ನಾಸ್ತಿಯಾಗದು. ಇದೆತ್ತಣ ಉಲುಹೊ ಗುಹೇಶ್ವರಾ?