ವಚನ - 514     
 
ಹರಿ ಹೊಲಬನರಿಯ, ಬ್ರಹ್ಮ ಮುಂದನರಿಯ, ರುದ್ರ ಲೆಕ್ಕವ ಮರೆದು ಜಪವನೆಣಸುತ್ತೈದಾನೆ. ಈಶ್ವರ ಪವನಯೋಗದಲ್ಲಿ ಮಗ್ನನಾದ. ಸದಾಶಿವ ಭಾವದಲ್ಲಿ ಭ್ರಮಿತನಾದ. ಸರ್ವಗತ ಶಿವಗುಸುರಾದ. ಈ ಒಂದಂಡಜದೊಳಗಣ ಬಾಲಕರೈವರು, ನಿಮ್ಮನೆತ್ತ ಬಲ್ಲರು ಗುಹೇಶ್ವರಾ.