ವಚನ - 521     
 
ಮಜ್ಜನಕ್ಕೆರೆವಡೆ ಭೂತವಿಕಾರ ನಂದಿ ಭೃಂಗಿ ವೀರಭದ್ರಾದಿ ಗಣಂಗಳೆಲ್ಲರೂ ಬ್ರಹ್ಮರಾಕ್ಷಸರು. ಪ್ರಮಥ ಗಣಂಗಳೆಲ್ಲರೂ ಪ್ರೇತರು. ಅರ್ಧನಾರೀಶ್ವರರೆಲ್ಲರೂ ಚಿಕ್ಕಮಕ್ಕಳ ಮೇಲೆ, ತಪ್ಪ ಸಾಧಿಸಿ ಕಾಡಿ ಉಂಬರು. ಈ ನಾಲ್ಕು ಸ್ಥಾನದೊಳಗೆ ಆವುದೂ ಅಲ್ಲ ಗುಹೇಶ್ವರಾ ನಿಮ್ಮ ಶರಣರುಗಳ ಪರಿ ಬೇರೆ!