ವಚನ - 522     
 
ಭಕ್ತಿಯೆಂಬುದು ಯುಕ್ತಿಯೊಳಗು, ಪೂಜೆಯೆಂಬುದು ನಿರ್ಮಾಲ್ಯದೊಳಗು. ಪ್ರಸಾದವೆಂಬುದು ಓಗರದೊಳಗು, ಆಚಾರವೆಂಬುದು ಅನಾಚಾರದೊಳಗು. ಧರ್ಮವೆಂಬುದು ಅಧರ್ಮದೊಳಗು, ಸುಖವೆಂಬುದು ದುಃಖದೊಳಗು. ವ್ರತವೆಂಬುದು ವೈರಾಗ್ಯದೊಳಗು, ನೇಮವೆಂಬುದು ಉದ್ದೇಶದೊಳಗು. ಅಹಿಂಸೆಯೆಂಬುದು ಹಿಂಸೆಯೊಳಗು!- ಇವಾವಂಗವೂ ಇಲ್ಲದೆ ಗುಹೇಶ್ವರಾ ನಿಮ್ಮ ಶರಣ ಸುಖಿಯಾಗಿರ್ದನು!