ವಚನ - 529     
 
ತನು ಬತ್ತಲಿದ್ದರೇನೊ ಮನ ಶುಚಿಯಾಗದನ್ನಕ್ಕರ? ಮಂಡೆ ಬೋಳಾದಡೇನೊ, ಭಾವ ಬಯಲಾಗದನ್ನಕ್ಕರ? ಭಸ್ಮವ ಹೂಸಿದಡೇನೊ, ಕರಣಾದಿ ಗುಣಂಗಳನೊತ್ತಿ ಮೆಟ್ಟಿ ಸುಡದನ್ನಕ್ಕರ? ಇಂತೀ ಆಶೆಯ ವೇಷದ ಭಾಷೆಗೆ, ಗುಹೇಶ್ವರಾ ನೀ ಸಾಕ್ಷಿಯಾಗಿ ಛೀ ಎಂಬೆನು.