ವಚನ - 539     
 
ಜಗತ್‍ಸೃಷ್ಟನಹ ಅಜನ ಕೊಂಬು ಮುರಿಯಿತ್ತು. ಧರೆಯ ಚಂದ್ರಸೂರ್ಯರಿಬ್ಬರೂ ನೆಲಕ್ಕೆ ಬಿದ್ದರಲ್ಲಾ! ಉದಯ ನಿಂದಡೆ ಅಸ್ತಮಾನವಹುದು. ಊರು ಬೆಂದು ಉಲುಹಳಿದುದು. ಇದೇನು ಸೋಜಿಗವೊ! ದೇವ ಸತ್ತ ದೇವಿ ಕೆಟ್ಟಳು, ಆನು ಬದುಕಿದೆನು ಗುಹೇಶ್ವರಾ.