ವಚನ - 541     
 
ಉದಕದ ಕೈಕಾಲ ಮುರಿದು, ಅಗ್ನಿಯ ಕಿವಿಮೂಗನರಿದು, ವಾಯುವ ತಲೆಯ ಕೊಯ್ದು, ಆಕಾಶವ ಶೂಲದಲಿಕ್ಕಿದ, ಬಲ್ಲಿದ ತಳವಾರನೀತನು! ಅರಸು, ಪ್ರಧಾನ, ಮಂತ್ರಿ-ಮೂವರ ಮುಂದುಗೆಡಿಸಿದ ಬಲ್ಲಿದ ತಳವಾರನೀತನು! ಒಂಬತ್ತು ಬಾಗಿಲ ಕದವನಿಕ್ಕಿ ಬಲಿದು ಬಿಯ್ಯಗವ ಹೂಡಿ ನವಸಾಸಿರ ಮಂದಿಯ ಕೊಂದುಳಿದನು ಗುಹೇಶ್ವರಾ ನಿಮ್ಮ ಶರಣ.