ವಚನ - 570     
 
ಮೇರುಮಂದಿರದಲ್ಲಿ ಈರೈದರತಲೆ, ಧಾರುಣಿಯ ಜನರೆಲ್ಲ ಬಣ್ಣಿಸುತ್ತಿಪ್ಪರು. ಜ್ಞಾನಾಮೃತರಸದಲ್ಲಿ ಓಗರವ ಮಾಡಿ ಆರೋಗಣೆಯ ಮಾಡಿದೆನು. ʼವಿಷಮಾಕ್ಷ ಹರ ಭಸ್ಮವಿಭೂಷಣ ಶಶಿಧರ ಶರಣು ಶರಣೆʼನುತಿದ್ದೆನು. ಇಂದ್ರಾಗ್ನಿಯ ಪುರಪಟ್ಟಣದಲ್ಲಿ ಚಂದ್ರಾಹಾರವ ಬೇಡಿದಡೆ ಖಂಡಕಪಾಲದಲ್ಲಿ ಉಂಡ ತೃಪ್ತಿ, ಅಖಂಡ ನಿರಾಳ ಗುಹೇಶ್ವರ.