ವಚನ - 599     
 
ಕಂಗಳಲ್ಲಿ ನಟ್ಟಗಾಯವನಾರಿಗೆ ತೋರಬಹುದಯ್ಯಾ? ಮನ ಸೋಂಕಿದ ಸುಖವ ಮೊಟ್ಟೆಯ ಕಟ್ಟಬಹುದೆ? ಆತ ನಿಂದ ನಿಲವಾತಂಗೆ ಸಾಧ್ಯವಾಯಿತ್ತು. ಆತ ನಿಂದ ನಿಲವನೇನೆಂಬೆ ಗುಹೇಶ್ವರಾ.