ವಚನ - 632     
 
ಹೊರಗನೆ ಕೊಯ್ದು ಹೊರಗನೆ ಪೂಜಿಸಿ ಹೊರಗಾಗಿ ಹೋಯಿತ್ತು ತ್ರೈಜಗವೆಲ್ಲ. ಆನದನರಿಯದಂತೆ ಲಿಂಗವ ಪೂಜಿಸ ಹೋದಡೆ, ಕೈ ಲಿಂಗದಲ್ಲಿ ಸಿಲುಕಿತ್ತಲ್ಲಾ! ಮನ ದೃಢದಿಂದ ನಿಮ್ಮ ನೆನೆದಿಹೆನೆಂದಡೆ ತನು ಸಂದಣಿಸಿತ್ತು ಗುಹೇಶ್ವರಾ.