ವಚನ - 731     
 
ಅಂದಂದಿನ ಮಾತನು ಅಂದಂದಿಗೆ ಅರಿಯಬಾರದು. ಹಿಂದೆ ಹೋದ ಯುಗಪ್ರಳಯಂಗಳ ಬಲ್ಲವರಾರಯ್ಯಾ? ಮುಂದೆ ಬಪ್ಪ ಯುಗಪ್ರಳಯಂಗಳ ಬಲ್ಲವರಾರಯ್ಯಾ? ಬಸವಣ್ಣನು ಆದಿಯಲ್ಲಿ ಲಿಂಗ ಶರಣನೆಂಬುದ ಭೇದಿಸಿ ನೋಡಿ ಅರಿವರಿನ್ನಾರಯ್ಯಾ? ಲಿಂಗ ಜಂಗಮ ಪ್ರಸಾದದ ಮಹಾತ್ಮೆಗೆ ಬಸವಣ್ಣನೆ ಆದಿಯಾದನೆಂಬುದನರಿದ ಸ್ವಯಂಭು ಜ್ಞಾನಿ, ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣನೊಬ್ಬನೆ.