ವಚನ - 764     
 
ಅನ್ನವನಿಕ್ಕಿ ನನ್ನಿಯ ನುಡಿದು, ಅರವಟ್ಟಿಗೆಯನಿಕ್ಕಿ ಕೆರೆಯ ಕಟ್ಟಿಸಿದಡೆ ಮರಣದಿಂದ ಮೇಲೆ ಸ್ವರ್ಗ ಉಂಟಲ್ಲದೆ ಶಿವನ ನಿಜವು ಸಾಧ್ಯವಾಗದು. ಗುಹೇಶ್ವರನನರಿದ ಶರಣಂಗೆ ಆವ ಫಲವೂ ಇಲ್ಲ