ವಚನ - 824     
 
ಅರಿಯದ ಕಾರಣ ಕುರುಹುವಿಡಿವೆನಲ್ಲದೆ ಅರಿದ ಬಳಿಕ ಇನ್ನೇನೊ? ಬಿಟ್ಟಡೆ ಸಮಯ ವಿರೋಧ, ಬಿಡದಿದ್ದರೆ ಜ್ಞಾನ ವಿರೋಧ. ಗುಹೇಶ್ವರಲಿಂಗವು ಉಭಯ ದಳದ ಮೇಲೈದಾನೆ ಕಾಣಾ ಸಿದ್ಧರಾಮಯ್ಯಾ.