ವಚನ - 829     
 
ಅರಿವ ಬಲ್ಲೆನೆಂದು ಬರುನುಡಿಯ ನುಡಿವರೆ? ಸತ್ಯವನರಿದವಂಗೆ ಮಿಥ್ಯಾಭಾವವುಂಟೆ? ತಥ್ಯ ಮಿಥ್ಯ ಉಭಯಭಾವವಳಿದಿರಬೇಕು. ಸಮಯವೆಂಬುದು ಸಂಪದ. ಅದು ನಿನಗನ್ಯವೆ? ಸರ್ವಸಮಯ ಸಂಪದವಾದಲ್ಲಿ ಗುಹೇಶ್ವರಲಿಂಗಕ್ಕೆ ತಥ್ಯಮಿಥ್ಯವಿಲ್ಲ ಘಟ್ಟಿವಾಳಯ್ಯ.