ವಚನ - 831     
 
ಅರಿವರತು ಮರಹುಗೆಟ್ಟು ತನ್ನಲ್ಲಿ ತಾನು ಸನ್ನಿಹಿತನಾದವಂಗೆ ದುಃಖಿಸುವರೆ ಹೇಳಾ? ಶೋಕಿಸುವರೆ ಹೇಳಾ? ಒಡಲಿಲ್ಲದಾತಂಗೆ ಎಡೆಯಲೊಂದು ಅಳಿವುಂಟೆಂದು ನುಡಿದು ಹೇಳುವ ಮಾತು ಭ್ರಾಂತು ನೋಡಾ! ಎರಡಿಲ್ಲದ ಐಕ್ಯಂಗೆ ಒಳಹೊರಗಿಲ್ಲ ನೋಡಾ, ಗುಹೇಶ್ವರನ ಶರಣ ಅಜಗಣ್ಣಂಗೆ!