ವಚನ - 833     
 
ಅರಿವಿಂದರಿಯಬಾರದು, ಕುರುಹುವಿಡಿದ ಪರಿಯೆಂತಯ್ಯಾ? ತೆರಹಿಲ್ಲದ ಘನವನರಿದೆಹೆನೆಂದಡೆ, ಅರುಹು ಮರಹು ನಷ್ಟವಾದ ಮಹದರಿವು ತಾನಾಗಿ ಗುಹೇಶ್ವರಲಿಂಗವನರಿಯದಂತಿರಬೇಕು ಕಾಣಾ ಸಿದ್ಧರಾಮಯ್ಯ.