ವಚನ - 853     
 
ಅಳಿಯ, ಬಳಿಯ ಸುಳಿವನಲ್ಲ ಪ್ರಳಯವಿಲ್ಲದ ವಿಜಯನು. ಕುಳಾಕುಳದ ಆತ್ಮನ ಅಂಗದ ಸಂಗಿಯಲ್ಲ. ಸುಳುಹಿನೊಳಗಣ ಸೂಕ್ಷ್ಮವ ತಿಳಿದು ನೋಡುವಡೆ ಅಣಿಮಾದಿ ಗುಣರಹಿತನು, ಅಕಲ್ಪಿತಮಹಿಮನನೇನೆಂಬೆ? ನೆಳಲ ಕಳವಳದ ಬಳಿಯ ಭಾವರೂಪನಲ್ಲ! ಬೆಳಗಿನೊಳಗಣ ಬೆಳಗು, ಗುಹೇಶ್ವರಾ ನಿಮ್ಮ ಶರಣನ ನಿಲವು!