ವಚನ - 909     
 
ಆರಾರ ಭಾವಕ್ಕೆ ತೋರಿದಂತೆ ಆ ಕುಳಕ್ಕೆ ಸುಖವಾಗಿಪ್ಪನು. ಹಿಡಿದ ವ್ರತನೇಮಂಗಳಲ್ಲಿ ಬಿಡುಗಡೆ ಇಲ್ಲದಿರಬೇಕು. ತಾ ಮಾಡುವ ನಿತ್ಯನೇಮಂಗಳಲ್ಲಿ ಭಾವಶುದ್ಧವಾಗಿಪ್ಪಡೆ ಗುಹೇಶ್ವರಲಿಂಗಕ್ಕೆ ಅನ್ಯಭಿನ್ನವಿಲ್ಲ ಮಡಿವಾಳ ಮಾಚಯ್ಯಾ.