ವಚನ - 951     
 
ಉದಕದ ಕೊಡನ ಹೊತ್ತಾಡುವ ಗೊರವಿತಿಯ ಕೈಯಲ್ಲಿ ಕಂಕಣ, ಉಲಿವ ಗೆಜ್ಜೆ ಚರಣದಲ್ಲಿ. ಉರಿಯ ಗೊರವನ ನೆರೆವ ಭರವಸದಿಂದ ಬಂದಿರಲು ಬಹಳ ಮುಳ್ಳಡ್ಡಲಾದವಲ್ಲಾ! ಕಂಕಣದುಲುಹು ನಂದಿ, ಕಣ್ಣುದೆರೆದಾ ಮುಳ್ಳಳಿಯಲು ಕಾಡುಗಿಚ್ಚೆದ್ದು ಕರಡವ ಸುಟ್ಟಂತೆ ಪ್ರಾಣಗುಣ ಪ್ರಧ್ವಂಸಂಗೆ ಅನ್ಯೋನ್ಯ ಭಾವತ್ರಯವುಂಟೆ? ಶರಣಲಿಂಗಕ್ಕೆ ಸಂದಿಲ್ಲ ಗುಹೇಶ್ವರಾ.