ವಚನ - 954     
 
ಉದಕ ಮಜ್ಜನವಲ್ಲ ಪತ್ರೆ ಪೂಜೆಯಲ್ಲ. ಧೂಪ ಪರಿಮಳವಲ್ಲ, ಕಂಚುಬೆಳಗಲ್ಲ, ಸಯಧಾನ ಅರ್ಪಿತವಲ್ಲ! ಅದೆಂತೆಂದಡೆ: ಸಜ್ಜನವೆ ಮಜ್ಜನ, ಸತ್ಯಸದಾಚಾರವೆ ಪತ್ರೆ ಪುಷ್ಪ. ಅಷ್ಟಮದಂಗಳ ಸುಟ್ಟುದೆ ಧೂಪ, ನಯನವೆ ಸ್ವಯಂ ಜ್ಯೋತಿ, ಪರಿಣಾಮವೆ ಅರ್ಪಿತ ಕಾಣಾ ಗುಹೇಶ್ವರಾ.