ವಚನ - 996     
 
ಐದ ಕಟ್ಟಿ ಐದ ನೆಗಪಿ, ಮನಪವನಧ್ಯಾನ ಭಾವ ದೃಢದಿಂದ ಧ್ಯಾನದಿ ನೋಡಿ, ಕಾಯದ ಗಾಳಿಯ ಸಂಚವ ಶೋಧಿಸಿ, ಒಳಗೆ ಜಾರಿದ ಅಮೃತವನು ವಾಯುಮಂಡಲದಲೆತ್ತಿ, ನಾಭಿಮಂಡಲದಲ್ಲಿ ನುಂಗಿ, ಮಾಯಾಮಂಡಲ ತೋರಲರಿಯ ಬಲ್ಲಡೆ ಗುಹೇಶ್ವರಲಿಂಗದಲ್ಲಿ ಆತ ಶಿವಯೋಗಿ.